ಕುಸುಮ ನಂದರಾಜ್

Update: 2020-12-19 17:22 GMT

ಸಾಮಾಜಿಕ ಧುರೀಣರು ಹಾಗೂ ದಲಿತ ನಾಯಕರಾದ ನಂದರಾಜ್ ಸಂಕೇಶರವರ ಧರ್ಮಪತ್ನಿ ಕುಸುಮ (45) ದಿಢೀರನೆ ಆರೋಗ್ಯದಲ್ಲಿ ಏರುಪೇರು ಸಂಭವಿಸಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ.

ಕುಸುಮರವರು 15 ವರ್ಷಗಳ ಹಿಂದೆ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜಾಲ್ಸೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ನಂದರಾಜ್ ರವರು ಕಾಂಗ್ರೆಸ್ ನಾಯಕರಾಗಿದ್ದು, ಸುಳ್ಯದ ತಾ.ಪಂ.ಕಚೇರಿ ವಾಣಿಜ್ಯ ಸಂಕೀರ್ಣದಲ್ಲಿ ಸೇವಾ ಕೇಂದ್ರ ನಡೆಸುತ್ತಿದ್ದರು. 

ಅಪರಾಹ್ನ ಮನೆಯಲ್ಲಿರುವ ವೇಳೆ ಕುಸುಮರವರಿಗೆ ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದರೆನ್ನಲಾಗಿದೆ. ಕೂಡಲೇ ಕುಸುಮಾರನ್ನು ಕೆ.ವಿ.ಜಿ.ಆಸ್ಪತ್ರೆಗೆ ಕರೆದೊಯ್ದರು. ಆದರೆ ಆ ವೇಳೆಗೆ ಕುಸುಮ ಕೊನೆಯುಸಿರೆಳೆದಿದ್ದರೆಂದು ತಿಳಿದುಬಂದಿದೆ. ಮೃತರು ಪತಿ, ಮೂವರು ಪುತ್ರಿಯರು, ಅಳಿಯ ಹಾಗೂ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ