ವಿನಯ್ ಕುಲಕರ್ಣಿ ಜಾಮೀನು ಕೋರಿ ಅರ್ಜಿ: ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿದ ಹೈಕೋರ್ಟ್

Update: 2020-12-20 17:16 GMT

ಧಾರವಾಡ, ಡಿ. 20: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‍ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಧಾರವಾಡ ಹೈಕೋರ್ಟ್ ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಡಿ.22ರ ವರೆಗೆ ಕಾಲಾವಕಾಶ ನೀಡಿದೆ. 

ಜಾಮೀನು ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಧಾರವಾಡ ಹೈಕೋರ್ಟ್‍ಗೆ ಡಿ.15ರಂದು ಅರ್ಜಿ ಸಲ್ಲಿಸಿದ್ದರು. ಕೆಲ ಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ಸಿಬಿಐಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತು. ಸಿಬಿಐ ವಿಶೇಷ ನ್ಯಾಯಾಲಯ ವಿನಯ್‍ಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆ ವಿನಯ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News