ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ
Update: 2020-12-21 22:13 IST
ಮಂಗಳೂರು, ಡಿ.21: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಆಹಾರ ಸುರಕ್ಷತಾ ಇಲಾಖೆ ಮತ್ತು ಊರ್ವಸ್ಟೋರ್ ಪೊಲೀಸ್ ಠಾಣೆ ಅಧಿಕಾರಿಗಳೊಂದಿಗೆ ದ.ಕ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತನಿಖಾ ದಳ ನಗರದಲ್ಲಿ ಕಾರ್ಯಾಚರಣೆ ನಡೆಸಿತು.
ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತಾಧಿಕಾರಿ ರಾಜು, ಸಿಪಿಸಿ ಬಸವರಾಜು, ಜಿಲ್ಲಾ ಸಲಹೆಗಾರ ಡಾ.ಹನುಮಂತರಾಯಪ್ಪ, ಆಪ್ತ ಸಮಾಲೋಚಕ ವಿಜಯ್ಕುಮಾರ್, ವಿದ್ಯಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.