×
Ad

ಹಲ್ಲೆ‌ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ‌ ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ

Update: 2020-12-22 23:58 IST

ಕೊಣಾಜೆ : ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ‌ ಹರೇಕಳದಲ್ಲಿ  ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ನಡುವೆ  ನಡೆದ ಚಕಮಕಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಯು.ಟಿ.ಖಾದರ್ ನೇತೃತ್ವದಲ್ಲಿ ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿ ಒತ್ತಾಯಿಸಿದರು.

ಮಾತಿನ ಚಕಮಕಿ ಹಾಗೂ ಘರ್ಷಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನ ಕಾರ್ಯಕರ್ತ ಝಕಾರಿಯ ಮಲಾರ್ ಅವರಿಗೆ  ಎಸ್ ಡಿಪಿ ಐ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎಂದು ದೂರಲಾಗಿದೆ. ಹಲ್ಲೆಗೊಳಗಾದ ಝಕಾರಿಯ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ  ಮೂವರ  ವಿರುದ್ದ ಪ್ರಕರಣ ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News