×
Ad

ಕಾಪು: ಗಾಯಾಳುವನ್ನು ಸಾಗಿಸುತಿದ್ದ ಆ್ಯಂಬುಲೆನ್ಸ್ ಗೆ ಕಾರು ಢಿಕ್ಕಿ

Update: 2020-12-25 20:40 IST

ಕಾಪು : ಅಪಘಾತದಲ್ಲಿ ಗಾಯಗೊಂಡ ಗಾಯಾಳುವನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ಕಾರೊಂದು ಲಾರಿಗೆ ಢಿಕ್ಕಿ ಹೊಡೆದು ನಂತರ ಆ್ಯಂಬುಲೆನ್ಸ್ ಗೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಸಂಜೆ ಮೂಳೂರಿನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಮೂಳೂರಿನಲ್ಲಿ ಬಸ್ಸಿಗಾಗಿ ಕಾಯುತಿದ್ದ ಉಚ್ಚಿಲದ ನಿವಾಸಿ ಬಿಲ್ಲು (43) ಎಂಬರಿಗೆ ಕಾರೊಂದು ಢಿಕ್ಕಿ ಹೊಡೆಯಿತು. ತೀವ್ರ ಗಾಯಗೊಂಡ ಇವರನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ಕಾರೊಂದು ವೇಗವಾಗಿ ಬಂದು ಲಾರಿಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ನಂತರ ಆ್ಯಂಬುಲೆನ್ಸ್ ಗೆ ಢಿಕ್ಕಿ ಹೊಡೆಯಿತು.ಈ ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಪ್ರಕರಣ ಕಾಪು ಠಾಣೆಯಲ್ಲಿ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News