​ಅಪಘಾತ: ಗಾಯಾಳು ಮೃತ್ಯು

Update: 2020-12-25 16:42 GMT

ಶಂಕರನಾರಾಯಣ, ಡಿ.25: ಶಂಕರನಾರಾಯಣ ಇಎಸ್‌ಎಸ್‌ಆರ್ ಪೆಟ್ರೋಲ್ ಬಂಕ್ ಎದುರುಗಡೆ ಸಂಭವಿಸಿದ ಅಪಘಾತದಿಂದ ಗಾಯ ಗೊಂಡ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.

ಮೃತರನ್ನು ಸತೀಶ್ ಎಂದು ಗುರುತಿಸಲಾಗಿದೆ. ಡಿ.18ರಂದು ರಾತ್ರಿ ಶಂಕರ ನಾರಾಯಣ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಬೈಕ್, ಹತೋಟಿ ತಪ್ಪಿ ರಸ್ತೆಯ ಬದಿ ಚರಂಡಿಯಲ್ಲಿ ಬಿದಿದ್ದು, ಇದರಿಂದ ಗಂಭೀರವಾಗಿ ಗಾಯ ಗೊಂಡಿದ್ದ ಸವಾರ ಸತೀಶ್ ವುಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಡಿ.24ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆಗೆ ಬಂದ ಇವರು, ಡಿ.25ರಂದು ಬೆಳಗ್ಗೆ ಮನೆಯಲ್ಲಿ ಅಸ್ವಸ್ಥಗೊಂಡು, ಕೋಟೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News