ಯಡಿಯೂರಪ್ಪ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷ ನಾಯಕರಿಗೆ ವಿಶ್ವನಾಥ್ ತಿರುಗೇಟು

Update: 2020-12-25 17:29 GMT

ಮೈಸೂರು,ಡಿ.25: ಡಿನೋಟಿಫಿಕೇಶನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷಗಳ ನಾಯಕರಿಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ತಿರುಗೇಟು ನೀಡಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನೋಟಿಫಿಕೇಶನ್ ವಿಚಾರವಾಗಿ ಯಡಿಯೂರಪ್ಪ ಅವರು ಜೈಲಿಗೆ ಹೋಗಬೇಕು ಎನ್ನುತ್ತಿದ್ದೀರಿ. ನೀವು ಮಾಡಿರುವುದನ್ನು ಹೊರಗಡೆ ತನ್ನಿ. ಅರ್ಕಾವತಿ ಡಿನೋಟಿಫಿಕೇಶನ್ ವಿಚಾರ ಹೊರಗೆ ಬಂದರೆ ನೀವೂ ಎಲ್ಲಿಗೆ ಹೋಗುತ್ತೀರಾ ಅಂತ ಗೊತ್ತಾಗುತ್ತೆ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.

ರಾಜಕೀಯ ಎಂದ ಮೇಲೆ ಆರೋಪ ಪ್ರತ್ಯಾರೋಪಗಳು ಸಹಜ. ಆದರೆ ವಸ್ತುಸ್ಥಿತಿಯೇ ಬೇರೆ ಇರುತ್ತದೆ. ರಾಜಕೀಯ ರಾಡಿಯ ಹಿಂದೆ ಮಾತನಾಡಬಾರದು. ಇವರು ಜೈಲಿಗೆ ಹೋಗಿದ್ದರು, ಅವರು ಜೈಲಿಗೆ ಹೋಗಿದ್ದರು ಅನ್ನುವ ಮಾತುಗಳೆಲ್ಲಾ ದೊಡ್ಡವರ ಬಾಯಲ್ಲಿ ಬರಬಾರದು. ಜವಾಬ್ದಾರಿಯುತ ರಾಜಕೀಯ ನಾಯಕರು ಶಾಂತಿಯ ವಾತಾವರಣ ನಿರ್ಮಾಣ ಮಾಡಬೇಕು. ಮಾನಸಿಕ ನೆಮ್ಮದಿ ಕದಡುವ ಮಾತುಗಳು ಯಾರಿಂದಲೂ ಬರಬಾರದು ಎಂದು ಸಲಹೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News