ಶೀಘ್ರವೇ ಹಲವು ಬಿಜೆಪಿ ನಾಯಕರು ಎನ್ ಸಿಪಿಗೆ ಸೇರ್ಪಡೆಯಾಗಲಿದ್ದಾರೆ: ಅಜಿತ್ ಪವಾರ್

Update: 2020-12-26 15:34 GMT

ಮುಂಬೈ: ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಚುನಾವಣೆಗೆ ಮೊದಲು ಬಿಜೆಪಿ ಸೇರಿಕೊಂಡಿದ್ದ ನಾಯಕರುಗಳು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಎನ್ ಸಿಪಿಗೆ ವಾಪಸಾಗಲಿದ್ದಾರೆ ಎಂದು ಎನ್ ಸಿಪಿ ಮುಖಂಡ ಅಜಿತ್ ಪವಾರ್ ಶನಿವಾರ ಹೇಳಿದ್ದಾರೆ.

“ಈ ಹಿಂದೆ ಅಸೆಂಬ್ಲಿ ಚುನಾವಣೆಯ ವೇಳೆ ಎನ್ ಸಿಪಿ ಹಾಗೂ ಕಾಂಗ್ರೆಸ್ ನ ನಾಯಕರು ಹಾಗೂ ಕಾರ್ಯಕರ್ತರನ್ನು ಬಿಜೆಪಿ ದೊಡ್ಡ ಪ್ರಮಾಣದಲ್ಲಿ ತನ್ನೊಂದಿಗೆ ಸೇರಿಸಿಕೊಂಡಿತ್ತು. ಪಕ್ಷ ಅಧಿಕಾರಕ್ಕೆ ಬರುತ್ತದೆ. ತಮ್ಮ ಪ್ರದೇಶದ ಅಭಿವೃದ್ಧಿ ಯೋಜನೆಗೆ ಸಹಾಯ ಪಡೆಯಬಹುದೆಂದು ಭಾವಿಸಿದ್ದರು. ಇದೀಗ ಈ ನಾಯಕರು ಭ್ರಮನಿರಸನಗೊಂಡಿದ್ದು,ತಮ್ಮ ಪ್ರದೇಶದಲ್ಲಿ ಯಾವುದೇ ಯೋಜನೆ ಜಾರಿಮಾಡಲಾಗದೆ ಪರದಾಡುತ್ತಿದ್ದಾರೆ. ಹೀಗಾಗಿ ಅವರೆಲ್ಲರೂ ಪಕ್ಷಕ್ಕೆ ವಾಪಸಾಗಲು ಕಾದುಕುಳಿತ್ತಿದ್ದಾರೆ.ಇದು ಪುಣೆ ಹಾಗೂ ಪಿಂಪ್ರಿ-ಚಿಂಚ್ವಾಡದಲ್ಲಿ ಮಾತ್ರವಲ್ಲ ರಾಜ್ಯದ ಇತರ ಭಾಗಗಳಲ್ಲೂ  ನಡೆಯಲಿದೆ'' ಎಂದು ಪವಾರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News