ಯೋಗೇಶ್‍ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Update: 2020-12-28 11:33 GMT

ಧಾರವಾಡ, ಡಿ.28: ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಜ.8 ರವರೆಗೆ ವಿಸ್ತರಣೆ ಮಾಡಲಾಗಿದೆ.

ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆ ಸೋಮವಾರ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅವರನ್ನು ಹಾಜರುಪಡಿಸಲಾಯಿತು.

ಈ ವೇಳೆ ಧಾರವಾಡ ವಿಶೇಷ ಸಿಬಿಐ ಕೋರ್ಟ್ 2021ರ ಜ.8ರವರೆಗೆ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಆದೇಶಿಸಿದೆ. ನ.5ರಂದು ಸಿಬಿಐನಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬಂಧಿಸಿತ್ತು. ಈಗಾಗಲೇ ಜಾಮೀನು ಅರ್ಜಿ ಕೂಡ ವಜಾಗೊಂಡಿದ್ದು, ಹೈಕೋರ್ಟ್ ಗೆ ಜಾಮೀನು ಅರ್ಜಿ ಕೂಡ ವಿನಯ್ ಸಲ್ಲಿಸಿದ್ದಾರೆ. ಸದ್ಯ ಅವರು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News