ಅಪರಿಚಿತ ವಾಹನ ಢಿಕ್ಕಿ: ರಸ್ತೆ ದಾಟುತ್ತಿದ್ದ ಚಿರತೆಗೆ ಗಂಭೀರ ಗಾಯ
Update: 2020-12-28 18:19 GMT
ಮೈಸೂರು,ಡಿ.28: ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ.
ಮಧ್ಯರಾತ್ರಿ ವೇಳೆ ದೇವಿಕೆರೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ದೇವಿಕೆರೆ ಕ್ರಾಸ್ ಬಳಿ ಚಿರತೆ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಿರತೆಯ ಸೊಂಟ ಮುರಿದಿದ್ದು, ಚಿರತೆ ಗಂಭೀರ ಗಾಯಗೊಂಡಿದೆ.
ಮೇಲೇಳಲಾಗದೆ ಚಿರತೆ ನರಳುತ್ತಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದರು. ಜನರನ್ನು ಕಂಡ ಚಿರತೆ ಪೊದೆಯತ್ತ ತೆರಳಿತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಶುವೈದ್ಯ ಡಾ.ನಾಗರಾಜು, ಅರಣ್ಯ ಇಲಾಖೆ ಸಿಬ್ಬಂದಿ ಮಹೇಶ್ ಮತ್ತು ಸತೀಶ್ ಅರವಳಿಕೆ ಚುಚ್ಚು ಮದ್ದು ನೀಡಿ ಇಲವಾಲ ಬಳಿಯ ಆರೈಕೆ ಕೇಂದ್ರಕ್ಕೆ ಕರೆದು ಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.