ಈ.ಡಿ. ಮುಂದೆ ಹಾಜರಾಗಲು ಸಮಯಾವಕಾಶ ಕೋರಿದ ಶಿವಸೇನೆ ನಾಯಕ ಸಂಜಯ್ ರಾವತ್ ಪತ್ನಿ

Update: 2020-12-29 14:38 GMT

ಮುಂಬೈ, ಡಿ. 29: ಪಿಎಂಸಿ ಬ್ಯಾಂಕ್ ವಂಚನೆ ಹಗರಣದ ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಇನ್ನಷ್ಟು ಸಮಯ ನೀಡುವಂತೆ ಶಿವಸೇನೆಯ ನಾಯಕ ಸಂಜಯ್ ರಾವತ್ ಅವರ ಪತ್ನಿ ಕೋರಿದ್ದಾರೆ.

ಪಿಎಂಸಿ ಬ್ಯಾಂಕ್ ವಂಚನೆ ಹಗರಣಕ್ಕೆ ಸಂಬಂಧಿಸಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ರವಿವಾರ ಸಮನ್ಸ್ ಜಾರಿ ಮಾಡಿತ್ತು. ಇದು ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ ಹಾಗೂ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಡುವೆ ವಾಗ್ಸಮರಕ್ಕೆ ಕಾರಣವಾಗಿತ್ತು. ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಸಂಜಯ್ ರಾವತ್ ಸೋಮವಾರ ಆರೋಪಿಸಿದ್ದರು.

ಕೇಂದ್ರ ತನಿಖಾ ಸಂಸ್ಥೆಗಳ ಒತ್ತಡದಿಂದ ರಾಜೀನಾಮೆ ನೀಡಲಿರುವ ಕಾಂಗ್ರೆಸ್ ಹಾಗೂ ಎನ್‌ಸಿಪಿಯ 22 ಶಾಸಕರ ಪಟ್ಟಿ ಬಿಜೆಪಿ ನಾಯಕರಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News