ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್‌ನಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Update: 2020-12-29 16:57 GMT

ಸುರತ್ಕಲ್, ಡಿ. 27: ಎಸೆಸ್ಸೆಫ್ ಸುರತ್ಕಲ್ ಡಿವಿಷನ್ ಸಮಿತಿ ಮತ್ತು ಮುಕ್ಕದ ಶ್ರೀನಿವಾಸ ಆಸ್ಪತ್ರೆಯು ಜಂಟಿಯಾಗಿ ಇತ್ತೀಚೆಗೆ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಕೃಷ್ಣಾಪುರ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಶಸ್ವಿಯಾಗಿ ನಡೆಯಿತು.

ಡಿವಿಷನ್ ಅಧ್ಯಕ್ಷ ಫಾರೂಕ್ ಸಖಾಫಿ ಕಾಟಿಪಳ್ಳರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಕೃಷ್ಣಾಪುರ ಬದ್ರಿಯ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ ಅಧ್ಯಕ್ಷ ಅಬ್ದುಲ್ ಜಲೀಲ್ ಬದ್ರಿಯಾ ಉದ್ಘಾಟಿಸಿದರು.

ಗೌರವ ಡಾಕ್ಟರೇಟ್ ಪದವಿ ಪಡೆದ ಮಾಜಿ ಶಾಸಕ ಬಿಎ ಮೊಯ್ದಿನ್ ಬಾವಾ ಅವರನ್ನು ಸನ್ಮಾನಿಸಲಾಯಿತು. ಮಿಸ್ಬಾಹ್ ನಾಲೇಜ್ ಫೌಂಡೇಶನ್ ಅಧ್ಯಕ್ಷ ಅಲ್‌ಹಾಜ್ ಬಿಎಂ ಮುಮ್ತಾಝ್ ಅಲಿ, ರಾಜ್ಯ ಎಸ್ಸೆಸ್ಸೆಫ್ ಕಾರ್ಯದರ್ಶಿ ಅಶ್ರಫ್ ರಝಾ ಅಮ್ಜದಿ, ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ತಾಲೂಕು ಪ್ರಧಾನ ಕಾರ್ಯದರ್ಶಿ ಬಿಎ ಇಕ್ಬಾಲ್, ಮಾಜಿ ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ ಮಾತನಾಡಿದರು.

ಎಸೆಸ್ಸೆಫ್ ದ.ಕ ಜಿಲ್ಲಾ ಸದಸ್ಯ ಆರೀಫ್ ಝುಹುರಿ ಮುಕ್ಕ, ಎಸ್‌ವೈಎಸ್ ಕೃಷ್ಣಾಪುರ ಸೆಂಟರ್ ಅಧ್ಯಕ್ಷ ಹಬೀಬುರ್ರಹ್ಮಾನ್ ಸಖಾಫಿ, ಬದ್ರಿಯಾ ಜುಮಾ ಮಸ್ಜಿದ್‌ನ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಎಸ್‌ಎಂ ಅಬ್ದುಲ್ ಹಮೀದ್, ಶ್ರೀನಿವಾಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುನಿಲ್ ಫೈ ಉಪಸ್ಥಿತರಿದ್ದರು.

ಡಿವಿಷನ್ ಪ್ರಧಾನ ಕಾರ್ಯದರ್ಶಿ ತನ್ಸೀರ್ ಸ್ವಾಗತಿಸಿದರು. ಬದ್ರುಲ್ ಹುದಾ ಖತೀಬ್ ಅಶ್ರಫ್ ಸಖಾಫಿ ಕಕ್ಕಿಂಜೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News