ರಮೇಶ ದಾತೆ

Update: 2020-12-29 17:04 GMT

ಮಂಗಳೂರು, ಡಿ.29: ಚಿತ್ಪಾವನ ಸಂಘದ ಮಾಜಿ ಅಧ್ಯಕ್ಷ, ಸಾಮಾಜಿಕ ಕಾರ್ಯಕರ್ತ ಕೆ.ಎ.ರಮೇಶ ಹೆಬ್ಬಾರ ದಾತೆ (74) ಶನಿವಾರ ಕೊಟೆಕಾರು ಮಾಡೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಮೂಲತ: ಬೆಳ್ತಂಗಡಿ ಅಗಳಿಯವರಾದ ದಾತೆ ಮೂರು ದಶಕ ಗಳ ಕಾಲ ದ.ಕ.ಜಿಲ್ಲಾ ಕೃಷಿಕರ ಸಹಕಾರಿ ಮಾರುಕಟ್ಟೆಯಲ್ಲಿ ಸೇವೆ ಸಲ್ಲಿಸಿದ್ದರು. ಮಂಕು ತಿಮ್ಮನ ಕಗ್ಗದ ವ್ಯಾಖ್ಯಾನಗಳನ್ನು ಹಲವಾರು ಸಂಸ್ಥೆಗಳಲ್ಲಿ ನಡೆಸಿ ಜನಪ್ರಿಯರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ