ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Update: 2020-12-30 14:57 GMT

ಮಂಡ್ಯ, ಡಿ.1: ಇಬ್ಬರು ಮಕ್ಕಳಿಗೆ ನೇಣು ಬಿಗಿದ ತಾಯಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾಂಡವಪುರ ತಾಲೂಕು ಮೇಲುಕೋಟೆ ಬಳಿ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೃಷ್ಣೇಗೌಡನ ಪತ್ನಿ ನಿವೇದಿತಾ(26), ಮಕ್ಕಳಾದ ಗಾನವಿ(6) ಹಾಗೂ ಉಲ್ಲಾಸ್ (4) ಆತ್ಮಹತ್ಯೆ ಮಾಡಿಕೊಂಡಿರುವವರು.

ಪಾಂಡವಪುರ ತಾಲೂಕಿನ ನಲ್ಲಹಳ್ಳಿಯ ನಿವೇದಿತಾ ಅವರನ್ನು ಅದೇ ತಾಲೂಕಿನ ಕುಪ್ಪಳ್ಳಿಯ ರೈತ ಕೃಷ್ಣೇಗೌಡ ಅವರಿಗೆ 8 ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು.

ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಆದರೆ, ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮೇಲುಕೋಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News