ಸಾರಿಗೆ ಮುಷ್ಕರದಲ್ಲಿದ್ದ ನೌಕರ ಕೆಲಸದಿಂದ ವಜಾ: ಆರೋಪ

Update: 2020-12-30 18:06 GMT

ಬೆಂಗಳೂರು, ಡಿ.30: ಈ ಹಿಂದೆಯಷ್ಟೇ ನಡೆದ ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರನನ್ನು ಅಧಿಕಾರಿಗಳು ಕೆಲಸದಿಂದ ವಜಾಗೊಳಿಸಿರುವ ಆರೋಪ ಕೇಳಿಬಂದಿದೆ.

ತಮ್ಮನ್ನು ಸರಕಾರಿ ನೌಕರರೆಂದು ಪರಿಗಣಿಸುವಂತೆ ಇತ್ತೀಚಿಗೆ ಕೆಎಸ್ಸಾರ್ಟಿಸಿ ಸೇರಿದಂತೆ ನಾಲ್ಕು ನಿಗಮದ ಸಾರಿಗೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದು, ನೌಕರರ ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿದ್ದ ಸಾರಿಗೆ ನೌಕರರ ಒಕ್ಕೂಟದ ಮುಖಂಡ ಆನಂದ್ ಅವರನ್ನು ಅಧಿಕಾರಿಗಳು ಕೆಲಸದಿಂದ ವಜಾ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಎಂಟಿಸಿ ಚಾಲಕ ಆನಂದ್, ಆಡಳಿತ ಮಂಡಳಿ ಸೇಡಿನ ಕ್ರಮದ ಮೂಲಕ ಕೆಲಸದಿಂದ ವಜಾ ಮಾಡಿದೆ. ಈ ವಿಚಾರವನ್ನು ಸಾರಿಗೆ ಸಚಿವರು ಹಾಗೂ ಅಧ್ಯಕ್ಷರ ಗಮನಕ್ಕೆ ತಂದಿದ್ದು, ಒಂದು ವಾರದ ಗಡುವು ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News