ಯುನಿವೆಫ್ ಕರ್ನಾಟಕ : ಉಳ್ಳಾಲದಲ್ಲಿ ಸೀರತ್ ಸಮಾವೇಶ

Update: 2020-12-31 10:36 GMT

ಉಳ್ಳಾಲ : ಯುನಿವೆಫ್ ಕರ್ನಾಟಕ 2020ರ ನವೆಂಬರ್ 27ರಿಂದ  2021ರ ಜನವರಿ 29 ರ ವರೆಗೆ "ಸಾಮಾಜಿಕ ತಾರತಮ್ಯ ಮತ್ತು ಪ್ರವಾದಿ ಮುಹಮ್ಮದ್ (ಸ)" ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ "ಅರಿಯಿರಿ ಮನುಕುಲದ ಪ್ರವಾದಿಯನ್ನು" ಅಭಿಯಾನದ ಅಂಗವಾಗಿ ಉಳ್ಳಾಲ ಶಾಖೆಯ ವತಿಯಿಂದ  ಜ. 1 ರ ಸಂಜೆ 6.45 ಕ್ಕೆ  ಉಳ್ಳಾಲ ನಗರಸಭೆ ಮೈದಾನದಲ್ಲಿ ಸೀರತ್ ಸಮಾವೇಶ ಜರಗಲಿದೆ.

"ಭಾರತದಲ್ಲಿ ಇಸ್ಲಾಮ್ ಮತ್ತು ಪ್ರವಾದಿ(ಸ)" ಎಂಬ ವಿಷಯದಲ್ಲಿ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಉಪನ್ಯಾಸ ನೀಡಲಿದ್ದಾರೆ. ಉಳ್ಳಾಲ ನಗರಸಭೆ ಉಪಾಧ್ಯಕ್ಷರಾದ ಯು.ಪಿ. ಅಯ್ಯೂಬ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಉಳ್ಳಾಲ ಶಾಖಾಧ್ಯಕ್ಷ ಅಬ್ದುಶ್ಶುಕೂರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News