ಯುವ ಜನರಿಗೆ ಒಂದು ದಿನದ ಸಾಹಸ ತರಬೇತಿ

Update: 2020-12-31 16:50 GMT

ಉಡುಪಿ, ಡಿ.31: ಭಾರತ ಸರ್ಕಾರದ ನೆಹರು ಯುವ ಕೇಂದ್ರ ಸಂಘಟನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ನ್ಯಾಷನಲ್ ಅಕಾಡೆಮಿ ಆಫ್ ಅಡ್ವೆಂಚರ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಜನವರಿ 2ರಂದು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಯುವ ಕೇಂದ್ರದ ಆವರಣದಲ್ಲಿ ಒಂದು ದಿನದ ಉಚಿತ ಸಾಹಸ ತರಬೇತಿ ಕಾಯರ್ಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಅಡಿಯಲ್ಲಿ ಯುವ ಜನರಿಗೆ ಕೃತಕ ಗೋಡೆ ಹತ್ತುವಿಕೆ, ಮತ್ತಿತರ ಸಾಹಸ ಚಟುವಟಿಕೆ ಹಮ್ಮಿಕೊಳ್ಳುವುದರ ಜೊತೆಗೆ ಸಾಹಸ ಚಲನಚಿತ್ರ ಪ್ರದರ್ಶಿಸಲಾಗುತ್ತದೆ. ಅಲ್ಲದೇ ಸಾಹಸ ಕ್ರೀಡೆಗೆ ಸಂಬಂಧಿಸಿದ ವಸ್ತು ಪ್ರದರ್ಶನ ಹಾಗೂ ಸಲಕರಣೆಗಳ ಪ್ರದರ್ಶವನ್ನು ಏರ್ಪಡಿಸಲಾಗುತ್ತದೆ.

ಆಸಕ್ತಿ ಇರುವ ಯುವಜನತೆ ಜನವರಿ 2ರ ಬೆಳಗ್ಗೆ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಯುವ ಕೇಂದ್ರದ ಆವರಣದಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902781815, 9008840491ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News