ಮಕ್ಕಳನ್ನು ಆತಂಕವಿಲ್ಲದೆ ಶಾಲೆಗೆ ಕಳುಹಿಸಿ, ಅವರ ಆಗಮನಕ್ಕೆ ಶಾಲೆ ಕಾಯುತ್ತಿದೆ: ಸಚಿವ ಡಾ.ಸುಧಾಕರ್ ಮನವಿ

Update: 2021-01-01 04:55 GMT

ಬೆಂಗಳೂರು, ಜ.1: ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಇಂದಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗುತ್ತಿವೆ. ಮಕ್ಕಳ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿ ಎರಡನ್ನೂ ಗಮನದಲ್ಲಿಟ್ಟುಕೊಂಡು ಸರಕಾರ ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಈ ನಿರ್ಧಾರ ಕೈಗೊಂಡಿದೆ. 8 ತಿಂಗಳ ನಂತರ ಶಾಲೆ ಕಾಲೇಜುಗಳಿಗೆ ಮರಳುತ್ತಿರುವ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ನನ್ನ ಕಿವಿಮಾತು.”

“ಎಸೆಸೆಲ್ಸಿ ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. 'ಕೊರೋನ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ' ಎಂಬುದೇ ಸರಕಾರದ ಧ್ಯೇಯ.”

“ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ಸರಕಾರ ಸದಾ ನಿಮ್ಮೊಂದಿಗಿದೆ. ಬನ್ನಿ, ಕೊರೋನ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ” ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News