ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ವರದಿಯಾಗಿಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್

Update: 2021-01-01 12:21 GMT

ಬೆಂಗಳೂರು, ಜ.1: ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತರಕ ಘಟನೆಗಳು ವರದಿಯಾಗಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆ ಸರಳವಾಗಿ ಹೊಸ ವರ್ಷಾಚರಣೆಗೆ ಸರಕಾರ ನಿರ್ಧರಿಸಿತ್ತು. ಅದರಂತೆ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದರಿಂದಾಗಿ, ಎಲ್ಲಿಯೂ ಕೂಡ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದರು.

ನಮ್ಮ ಅಧಿಕಾರಿಗಳು, ಸಿಬ್ಬಂದಿ ಒಳ್ಳೆಯ ಕೆಲಸ ಮಾಡಿದ್ದು, ಬಹಳ ಶಾಂತಿಯುತವಾಗಿ ಸಂಭ್ರಮಾಚರಣೆ ನಗರದಲ್ಲಿ ನಡೆದಿದೆ. ಕೋವಿಡ್ ಮಾರ್ಗಸೂಚಿಗಳು ನೂರಕ್ಕೆ ನೂರರಷ್ಟು ಪಾಲನೆಯಾಗಿದೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News