ನಿಷೇಧಾಜ್ಞೆ ವಿರೋಧಿಸಿ ಹೊಸ ವರ್ಷಾಚರಣೆ: ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

Update: 2021-01-01 13:50 GMT

ಬೆಂಗಳೂರು, ಜ.1: ಕೋವಿಡ್-19 ಸಂಬಂಧ ಪೊಲೀಸ್ ಇಲಾಖೆ ಜಾರಿಗೊಳಿಸಿದ್ದ 144 ಸೆಕ್ಷನ್ ಅಡಿಯ ನಿಷೇಧಾಜ್ಞೆ ವಿರೋಧಿಸಿ ನಗರದ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆ ಮಾಡುವ ಮೂಲಕ ಪ್ರತಿಭಟಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.

ಗುರುವಾರ ತಡರಾತ್ರಿ ನಿಷೇಧಾಜ್ಞೆಗೆ ವಿರೋಧ ವ್ಯಕ್ತಪಡಿಸಿ, ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಮುಂದಾಗಿದ್ದ ವೇಳೆ ವಾಟಾಳ್ ಸೇರಿದಂತೆ ಅವರ ಪಕ್ಷದ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಸಂಭ್ರಮಾಚರಣೆಗೆ ನಿಷೇಧಾಜ್ಞೆ ಹೇರುವುದು ಸರಿಯಲ್ಲ. ರಾಜ್ಯ ಸರಕಾರ ಜನರ ಮನದಲ್ಲಿ ಭಯವನ್ನು ಸೃಷ್ಟಿಸಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News