ಕಾಂಗ್ರೆಸ್ ಪಕ್ಷ ಸಂಘಟನೆಗೆ ವಿಭಾಗೀಯ ಮಟ್ಟದಲ್ಲಿ ‘ಸಂಕಲ್ಪ ಸಮಾವೇಶ': ಸಲೀಂ ಅಹ್ಮದ್

Update: 2021-01-02 15:49 GMT

ಬೆಂಗಳೂರು, ಜ. 2: ಪಕ್ಷ ಸಂಘಟನೆ, ಮುಂಬರುವ ಉಪಚುನಾವಣೆ, ಜಿಲ್ಲಾ/ತಾಲೂಕು ಪಂಚಾಯತನ್ನು ದೃಷ್ಟಿಯಲ್ಲಿಟ್ಟುಕೊಂಡು, ಪ್ರಸ್ತುತ ರಾಜಕೀಯ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಸಮಾಲೋಚನೆ ನಡೆಸಲು ನಡೆಸಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ಜಿಲ್ಲಾ ಮುಖಂಡರ ‘ಸಂಕಲ್ಪ ಸಮಾವೇಶ' ಆಯೋಜಿಸಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯೂ ಸೇರಿದಂತೆ ಮೈಸೂರು ವಿಭಾಗದಲ್ಲಿ ಜ.6ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿರುವ ಸಾಗರ ಆಡಿಟೋರಿಯಂ, ಮಂಡ್ಯ ಜಿಲ್ಲೆಯೂ ಸೇರಿದಂತೆ ಬೆಂಗಳೂರು ವಿಭಾಗದಲ್ಲಿ ಜ.8ರಂದು ಬೆಂಗಳೂರಿನ ಆರ್.ವಿ.ಕಾಲೇಜಿನ ಪೂರ್ಣಿಮಾ ಪ್ಯಾಲೆಸ್‍ನಲ್ಲಿ, ದಾವಣಗೆರೆ ಸೇರಿದಂತೆ ಬೆಳಗಾವಿ ವಿಭಾಗದಲ್ಲಿ ಜ.11ರಂದು ಹುಬ್ಬಳ್ಳಿ ಕಾಟನ್ ಕೌಂಟಿ ರೆಸಾರ್ಟ್‍ನಲ್ಲಿ, ಜ.18ರಂದು ಕಲಬುರ್ಗಿ ನಗರದಲ್ಲಿ ಕಲಬುರ್ಗಿ ವಿಭಾಗದ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

‘ಈ ಸಭೆಗಳಲ್ಲಿ ಪ್ರತಿಪಕ್ಷ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ಎಐಸಿಸಿ ಪದಾಧಿಕಾರಿಗಳು ಮತ್ತು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದು ಸಲೀಂ ಅಹ್ಮದ್ ಮಾಹಿತಿ ನೀಡಿದ್ದಾರೆ.

‘ಜಿಲ್ಲೆಗಳ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ಅಭ್ಯರ್ಥಿಗಳು, ರಾಜ್ಯಸಭಾ ಸದಸ್ಯರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಂಚೂಣಿ ಘಟಕಗಳ ಪ್ರಮುಖರನ್ನು ಈ ಸಭೆಗೆ ಆಹ್ವಾನಿಸಲಾಗಿದೆ ಎಂದು ಸಲೀಂ ಅಹ್ಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News