ಹೆದ್ದಾರಿ ರಸ್ತೆಗಳಲ್ಲಿ ಎಚ್ಚರಿಕೆಯಿಂದ ಪ್ರಯಾಣಿಸಿ: ಪೊಲೀಸ್ ಆಯುಕ್ತ ಕಮಲ್ ಪಂತ್

Update: 2021-01-02 16:59 GMT

ಬೆಂಗಳೂರು, ಜ.2: ನೈಸ್ ರಸ್ತೆಯಲ್ಲಿ ದರೋಡೆ ನಡೆದಿದೆ ಎನ್ನಲಾದ ಘಟನೆಯಲ್ಲಿ ಸತ್ಯಾಂಶವಿಲ್ಲ. ಆದರೆ, ಹೆದ್ದಾರಿ ರಸ್ತೆಯಲ್ಲಿ ಪ್ರಯಾಣಿಸುವವರು ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿರುವ ಶಸ್ತ್ರಾಸ್ತ್ರಧಾರಿ ದುಷ್ಕರ್ಮಿಗಳು ಕರ್ನಾಟಕದ ಮೂಲದವರಲ್ಲ. ಆದರೂ ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಯಾವುದೇ ಸ್ಥಳದಲ್ಲಿಯೂ ಇಂತಹ ಘಟನೆಗಳು ನಡೆದಿಲ್ಲ. ಆದರೂ ಹೆದ್ದಾರಿಗಳಲ್ಲಿ ಒಂಟಿಯಾಗಿ ಚಲಿಸುವಾಗ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News