ಕರ್ತವ್ಯ ನಿರತ ಗ್ರಾ.ಪಂ.ಅಧಿಕಾರಿಗೆ ಹಲ್ಲೆ ಆರೋಪ : ಐವರ ವಿರುದ್ಧ ದೂರು
Update: 2021-01-03 06:36 GMT
ಕಡಬ: ಕರ್ತವ್ಯ ನಿರತ ಕುಟ್ರುಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಆರೋಪದಲ್ಲಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರಿಗೆ ಹೊಸ್ಮಠ ದೇರಾಜೆ ಕ್ರಾಸ್ ಬಳಿಯ ನಿವಾಸಿ ಯಾಕೂಬ್ ಸೇರಿದಂತೆ ಐವರು ಕಾರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಕಸಿದು ದಾಖಲೆಗಳನ್ನು ಡಿಲಿಟ್ ಮಾಡಿದ್ದಾರೆ ಎಂದು ಪಿಡಿಒ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ.
ಯಾಕೂಬ್ ಈಗಾಗಲೇ ಜ್ಯೂಸ್ ಸೆಂಟರ್ ಗೆ ಆಗಮಿಸಿದ ಯುವತಿಯ ಫೋಟೋ ತೆಗೆದು ಸ್ಟೇಟಸ್ ಹಾಕಿದ ವಿಚಾರದಲ್ಲಿ ಬಂಧನದಲ್ಲಿದ್ದು, ಇನ್ನುಳಿದ ನಾಲ್ವರಿಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.