ಸಿದ್ದರಾಮಯ್ಯರನ್ನು ನೆನಪಿಸದಿದ್ದರೆ ಪಾಪದ ಕೆಲಸವಾಗುತ್ತದೆ ಎಂದು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಹೇಳಿದ್ದೇಕೆ?

Update: 2021-01-03 16:09 GMT

ಬೆಂಗಳೂರು, ಜ.3:ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಚಿತ್ರಕಲಾಪರಿಷತ್ತು ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದು, ಈ ಸಂದರ್ಭದಲ್ಲಿ ಅವರನ್ನು ನೆನಪು ಮಾಡಿಕೊಳ್ಳದಿದ್ದರೆ ಅದು ಪಾಪದ ಕೆಲಸವಾಗುತ್ತದೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನುಡಿದರು.

ರವಿವಾರ ನಗರದ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಇಂದಿನಿಂದ ನಡೆಯುವ ಆನ್‍ಲೈನ್ ಚಿತ್ರಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಚಿತ್ರಕಲಾಪರಿಷತ್ತು ಅಭಿವೃದ್ಧಿಗೆ 2 ಕೋಟಿ ರೂ. ನೀಡಿದರು. ಈ ಹಣದಿಂದ ಹಲವು ಪ್ರಗತಿ ಕಾರ್ಯಕಗಳು ಪರಿಷತ್ತಿನಲ್ಲಿ ಜರುಗಿದವು ಎಂದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಈಗ ಚಿತ್ರಕಲಾಪರಿಷತ್ತು ಇರುವ ಜಾಗವನ್ನು ಸರಕಾರಿ ವಾಹನ ಚಾಲಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದರು. ನಂತರ, ಏನಾದರೂ ನೆನಪಿನಲ್ಲಿ ಉಳಿಯುವಂತಹ ಕಾರ್ಯ ಆಗಬೇಕು ಎಂಬ ಉದ್ದೇಶದಿಂದ ಪರಿಷತ್ತು ನಿರ್ಮಾಣ ಮಾಡಲಾಯಿತು ಎಂದು ಅವರು ನೆನಪು ಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News