ಕೆಲಸ ಇಲ್ಲದ ಚಿಂತೆ: ಕೂಲಿ ಕಾರ್ಮಿಕ ಆತ್ಮಹತ್ಯೆ

Update: 2021-01-04 15:48 GMT

ಕುಂದಾಪುರ, ಜ.4: ಕೆಲಸ ಇಲ್ಲದ ಚಿಂತೆಯಲ್ಲಿ ಕೂಲಿ ಕಾರ್ಮಿಕರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಕೋಟೇಶ್ವರ ಗ್ರಾಮದ ಕುಂಬ್ರಿ ಎಂಬಲ್ಲಿ ನಡೆದಿದೆ.

ಮೃತರನ್ನು ರಾಘವೇಂದ್ರ ಪೂಜಾರಿ (34) ಎಂದು ಗುರುತಿಸಲಾಗಿದೆ. ಇವರು ಸುಮಾರು 2 ತಿಂಗಳಿನಿಂದ ಸರಿಯಾಗಿ ಕೆಲಸ ಸಿಗದೆ ಮದ್ಯ ಸೇವನೆ ಚಟ ಹೊಂದಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗದ ಇವರು ಜ.1ರ ರಾತ್ರಿ 9ಗಂಟೆಯಿಂದ ಜ.3ರ ಬೆಳಗ್ಗೆ 8ಗಂಟೆಯ ಮಧ್ಯಾವದಿಯಲ್ಲಿ ಎಳ್ಳಾರ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News