ವಲಯ ಅರಣ್ಯಾಧಿಕಾರಿ ಆತ್ಮಹತ್ಯೆ
Update: 2021-01-05 13:51 GMT
ಬಳ್ಳಾರಿ, ಜ.5: ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ವಲಯ ಅರಣ್ಯಾಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಬಸವರಾಜ ವೀರಾಪೂರ(31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು ತಿಳಿದುಬಂದಿದೆ.
ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪೂರ ಗ್ರಾಮದ ಬಸವರಾಜ ವೀರಾಪೂರ, ಸಂಡೂರು ತಾಲೂಕಿನಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಏಕಾಏಕಿ ಸೋಮವಾರ ರಾತ್ರಿ ತಾವು ವಾಸಿಸುತ್ತಿದ್ದ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಸಂಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.