ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡ ಫಿರೋಝ್ ಮಲಾರ್‌ಗೆ ಸನ್ಮಾನ

Update: 2021-01-06 16:42 GMT

ಕೊಣಾಜೆ, ಜ.6: ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ಫಿರೋಝ್ ಮಲಾರ್ ಅವರಿಗೆ ಎಲ್ಯಾರ್ ಪದವು ಮೈದಾನದಲ್ಲಿ ಮಂಗಳವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸನ್ಮಾನಿಸಿದರು.

ಪಾವೂರು ಗ್ರಾಪಂನ ಮಾಜಿ ಅಧ್ಯಕ್ಷರಾದ ಫಿರೋಝ್ ಮಲಾರ್ ಸಂಘಟನಾ ಕಾರ್ಯದಲ್ಲಿ ಸದಾ ಮುಂಚೂಣಿಯಲ್ಲಿರುವುದನ್ನು ಮನಗಂಡ ಪಕ್ಷದ ಮುಖಂಡರು ಅವಿರೋಧ ಆಯ್ಕೆಗೆ ಸಹಕರಿಸಿದರು. ಗ್ರಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಈ ಸಂದರ್ಭ ಡಿಸಿಸಿ ಅಧ್ಯಕ್ಷ ಹರೀಶ್‌ ಕುಮಾರ್‌, ಶಾಸಕ ಯು.ಟಿ.ಖಾದರ್, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ  ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಪಕ್ಷದ ಮುಖಂಡರಾದ ಕೋಡಿಚಾಲ್‌ ಇಬ್ರಾಹಿಂ, ಕನಚೂರು ಮೋನು, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ ಅಸೈಗೋಳಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News