ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾಗೆ ಸಿಸಿಬಿ ನೋಟಿಸ್

Update: 2021-01-07 14:31 GMT

ಬೆಂಗಳೂರು, ಜ.7: ಬಿಜೆಪಿ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಯುವರಾಜ್ ಯಾನೆ ಸ್ವಾಮಿ ಜತೆ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾಗೆ ಜ.8ರ ಬೆಳಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಯುವರಾಜ್ ಖಾತೆಯಿಂದ ರಾಧಿಕಾ ಅವರಿಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಜ.8ರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ವಾಟ್ಸ್ ಆ್ಯಪ್ ಮತ್ತು ಟೆಕ್ಸ್ಟ್ ಮೆಸೇಜ್ ಮೂಲಕ ಅಧಿಕಾರಿಗಳು ನಟಿ ರಾಧಿಕಾಗೆ ನೋಟಿಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ವಂಚನೆ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿತ ಯುವರಾಜ್ ಖಾತೆಯಿಂದ ಕೋಟ್ಯಂತರ ರೂ., ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಬುಧವಾರ ಕೇಳಿ ಬಂದಿತ್ತು. ಈ ಸಂಬಂಧ ಜ.6ರಂದೇ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದ ನಟಿ ರಾಧಿಕಾ, ನಮಗೆ ಯುವರಾಜ್ 15 ವರ್ಷದಿಂದ ಪರಿಚಯ. ಒಂದು ಕೋಟಿ ಹಣ ನೀಡಿಲ್ಲ. 15 ಲಕ್ಷ ಮಾತ್ರ ನೀಡಿದ್ದರು. ಸಿನಿಮಾ ವ್ಯವಹಾರಕ್ಕಾಗಿ ನೀಡಿದ್ದರು ಎಂದು ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News