ಬಿಜೆಪಿ ಮುಖಂಡರ ಹೆಸರಿನಲ್ಲಿ ವಂಚನೆ ಪ್ರಕರಣ: ಯುವರಾಜ್ ಜಾಮೀನು ಅರ್ಜಿ ವಜಾ
Update: 2021-01-07 16:35 GMT
ಬೆಂಗಳೂರು, ಜ.7: ಬಿಜೆಪಿ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಯುವರಾಜ್ ಯಾನೆ ಸ್ವಾಮಿಯ ಮೊದಲ ಪ್ರಕರಣದ ಜಾಮೀನು ಅರ್ಜಿಯನ್ನು 1ನೆ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಸಿಸಿಬಿ ಪರ ವಕೀಲರ ವಾದ ಪುರಸ್ಕರಿಸಿದ ನಗರದ 1ನೆ ಎಸಿಎಂಎಂ ಕೋರ್ಟ್ ಜಾಮೀನು ಅರ್ಜಿ ವಜಾ ಮಾಡಿದೆ. ಯುವರಾಜ್ ಬಿಜೆಪಿ ಮುಖಂಡರ ಹೆಸರನ್ನು ಹೇಳಿಕೊಂಡು ಹಲವರಿಗೆ ವಂಚನೆ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು ಸಿಸಿಬಿ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ.