ರಾಜ್ಯದ ವಿವಿಧೆಡೆಯ142 ಪೊಲೀಸ್ ಇನ್‍ಸ್ಪೆಕ್ಟರ್ ಗಳ(ಸಿವಿಲ್) ವರ್ಗಾವಣೆ

Update: 2021-01-09 11:59 GMT

ಬೆಂಗಳೂರು, ಜ.9: ರಾಜಧಾನಿ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಕಡೆ 142 ಪೊಲೀಸ್ ಇನ್‍ಸ್ಪೆಕ್ಟರ್ ಗಳನ್ನು(ಸಿವಿಲ್) ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ಮಂಗಳೂರು ನಗರ ಸಿಇಎನ್ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಬಿ.ಸಿ.ಗಿರೀಶ್ ಅವರನ್ನು ಸಾಗರ ಗ್ರಾ. ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಶಿವಾಜಿನಗರ ಠಾಣೆಯಲ್ಲಿದ್ದ ಜಿ.ಸಿದ್ದರಾಜು ಅವರನ್ನು ತಲಘಟ್ಟಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೀಗೆ 142 ಇನ್‍ಸ್ಪೆಕ್ಟರ್ ಗಳನ್ನು ತಕ್ಷಣದಿಂದಲೇ ಜಾರಿ ಆಗುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News