ಬಿಜೆಪಿಗೂ ಯುವರಾಜ್‍ಗೂ ಸಂಬಂಧವಿಲ್ಲ: ಗೃಹ ಸಚಿವ ಬೊಮ್ಮಾಯಿ

Update: 2021-01-09 12:24 GMT

ಬೆಂಗಳೂರು, ಜ.9: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಯುವರಾಜ್‍ನನ್ನು ವಿಚಾರಣೆಗೊಳಪಡಿಸಿದ್ದು, ಈತನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾವಚಿತ್ರ ಇದ್ದ ಮಾತ್ರಕ್ಕೆ ಅವರಿಗೂ ವಂಚಕನಿಗೂ ಸಂಬಂಧ ಇದೆ ಎಂದು ಹೇಳುವುದು ತಪ್ಪಾಗುತ್ತದೆ ಎಂದರು. ರಾಜಕಾರಣಿಗಳು ಸಾರ್ವಜನಿಕ ಜೀವನದಲ್ಲಿರುವವರ ಜತೆ ಭಾವಚಿತ್ರ ತೆಗೆಸಿಕೊಳ್ಳುತ್ತಾರೆ. ಅದಕ್ಕೂ ಪ್ರಕರಣಕ್ಕೂ ತಳಕು ಹಾಕುವುದು ಸರಿಯಲ್ಲ ಎಂದರು.

ಯುವರಾಜ್ ಬಗ್ಗೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು, ನಂತರ ಸತ್ಯಾಂಶ ಹೊರ ಬರಲಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News