ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ ಸಭೆ: ಸಾಧಕ ಸದಸ್ಯರಿಗೆ ಸನ್ಮಾನ

Update: 2021-01-09 15:04 GMT

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸಭೆಯು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅವರ ಅಧ್ಯಕ್ಷತೆ ನಡೆಯಿತು.

ಸಂಸ್ಥೆಯ ಅಭಿವೃದ್ದಿಯಲ್ಲಿ ಆಡಳಿತ ಮಂಡಳಿಯವರ ಸಲಹೆ ಸೂಚನೆಗಳು ಮಹತ್ವದಾಗಿದೆ. ನಮ್ಮ ಆಡಳಿತ ಮಂಡಳಿಯ ಸದಸ್ಯರು ನೀಡುವ ಸಲಹೆ ಸೂಚನೆಗಳನ್ನು ಸಮರ್ಪಕವಾಗಿ ಪಾಲಿಸುತ್ತೇವೆ ಎಂದು ಯುವರಾಜ್ ಜೈನ್ ಹೇಳಿದರು.

ಮೂಡುಬಿದಿರೆಯ ಎಂಸಿಎಸ್ ಬ್ಯಾಂಕ್‍ನ ಅಧ್ಯಕ್ಷರಾಗಿ ಆಯ್ಕೆಯಾದ ಹಾಗೂ ರಾಜ್ಯ ಸರ್ಕಾರದ ಸಹಕಾರ ರತ್ನ ಪ್ರಶಸ್ತಿ ಪುರಸ್ಕøತರಾಗಿರುವ ಆಡಳಿತ ಮಂಡಳಿಯ ಸದಸ್ಯ ಎಂ.ಬಾಹುಬಲಿ ಪ್ರಸಾದ್ ಹಾಗೂ ಮತ್ತೋರ್ವ ಸದಸ್ಯ, ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆ ಯಾಗಿರುವ ಕೃಷ್ಣರಾಜ್ ಹೆಗ್ಡೆ ಕರಿಂಜೆ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.

ಅಡಳಿತ ಮಂಡಳಿಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಸದಸ್ಯರಾದ ಡಾ.ಪದ್ಮಪ್ರಸಾದ್ ಅಜಿಲ, ಕುಲದೀಪ ಎಂ., ಶೀತಲ್ ಕುಮಾರ್, ಗುಣಪಾಲ್ ಕೆ.ಕಡಂಬ, ಪ್ರತಾಪ್ ಕುಮಾರ್, ದಿನೇಶ್ ಆನಡ್ಕ, ಪದ್ಮಕೀರ್ತಿ, ಪ್ರಾಂಶುಪಾಲ ಪ್ರದೀಪ್ ಶೆಟ್ಟಿ, ಎಕ್ಸಲೆಂಟ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವಪ್ರಸಾದ್ ಉಪಸ್ಥಿತರಿದ್ದರು.

ಸಂಸ್ಥೆಯ ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ರಂಜಿತ್ ಜೈನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News