ರಾಜ್ಯದಲ್ಲಿಂದು ಕೋವಿಡ್ ಗೆ 4 ಮಂದಿ ಬಲಿ: 899 ಪ್ರಕರಣಗಳು ಪಾಸಿಟಿವ್

Update: 2021-01-09 15:55 GMT

ಬೆಂಗಳೂರು, ಜ.7: ರಾಜ್ಯದಲ್ಲಿ ಶನಿವಾರ 899 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 4 ಜನರು ಸೋಂಕಿಗೆ ಬಲಿಯಾಗಿದ್ದು, 872 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,26,767ಕ್ಕೆ ತಲುಪಿದ್ದು, 202 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,138ಕ್ಕೆ ತಲುಪಿದ್ದು, ಅನ್ಯ ಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 9,452ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

4 ಸೋಂಕಿತರು ಬಲಿ: ಬೆಂಗಳೂರು ನಗರ 3, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 899 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 9, ಬೆಳಗಾವಿ 23, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 465, ಬೀದರ್ 2, ಚಾಮರಾಜನಗರ 5, ಚಿಕ್ಕಬಳ್ಳಾಪುರ 31, ಚಿಕ್ಕಮಗಳೂರು 19, ಚಿತ್ರದುರ್ಗ 20, ದಕ್ಷಿಣ ಕನ್ನಡ 37, ದಾವಣಗೆರೆ 13, ಧಾರವಾಡ 9, ಗದಗ 4, ಹಾಸನ 31, ಕಲಬುರಗಿ 12, ಕೊಡಗು 3, ಕೋಲಾರ 16, ಕೊಪ್ಪಳ 4, ಮಂಡ್ಯ 6, ಮೈಸೂರು 42, ರಾಯಚೂರು 15, ಶಿವಮೊಗ್ಗ 19, ತುಮಕೂರು 15, ಉಡುಪಿ 20, ಉತ್ತರ ಕನ್ನಡ 11, ವಿಜಯಪುರ 15, ಬಾಗಲಕೋಟೆ 2.

ರಾಜಧಾನಿಯಲ್ಲಿ 465 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಶನಿವಾರದಂದು 465 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 445 ಸೋಂಕಿತರು ಬಿಡುಗಡೆಯಾಗಿದ್ದು, 3 ಜನರು ಮೃತರಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 3,92,128 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,346 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,81,905 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News