'ಸಮಸ್ತ' ವಿದ್ಯಾಭ್ಯಾಸ ಬೋರ್ಡ್ ಸದಸ್ಯರಾಗಿ ರಫೀಕ್ ಹಾಜಿ ನೇರಳಕಟ್ಟೆ ಆಯ್ಕೆ

Update: 2021-01-09 16:12 GMT

ವಿಟ್ಲ : 'ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್'  (ಎಸ್ಕೆಐಎಂವಿಬಿ) ಇದರ ಕೇಂದ್ರೀಯ ಸದಸ್ಯರಾಗಿ ಕರ್ನಾಟಕದಿಂದ ದ.ಕ.ಜಿಲ್ಲಾ ಮದ್ರಸ ಮದ್ರಸ ಮ್ಯಾನೇಜ್ ಮೆಂಟ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಹಾಜಿ ನೇರಳಕಟ್ಟೆ ಅವರು ಆಯ್ಕೆಯಾಗಿದ್ದಾರೆ.

ವಿವಿಧ ರಾಜ್ಯಗಳ ಪ್ರತಿನಿಧಿಗಳಿರುವ ಈ ಶಿಕ್ಷಣ ಮಂಡಳಿಯ ಅಧೀನದಲ್ಲಿ ಹತ್ತು ಸಾವಿರಕ್ಕೂ ಮಿಕ್ಕಿದ ಮದ್ರಸಗಳು ಕಾರ್ಯಾಚರಿಸುತ್ತಿವೆ.

ಸಮಾಜ ಸೇವಕರೂ, ಸಂಘಟನಾ ಚತುರರೂ ಆಗಿರುವ ರಫೀಕ್ ಹಾಜಿ ದೀರ್ಘಕಾಲದಿಂದ ದ.ಕ.ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ನ ಪ್ರಧಾನ ಕಾರ್ಯದರ್ಶಿಯಾಗಿ, ಮದ್ರಸ ಮ್ಯಾನೇಜ್ ಮೆಂಟ್ ನ ಕೇಂದ್ರೀಯ ಉಪಾಧ್ಯಕ್ಷರಾಗಿ, ಪುತ್ತೂರು ರೇಂಜ್ ಮದ್ರಸ ಮ್ಯಾನೇಜ್ ಮೆಂಟ್ ನ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘ ,ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News