ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಯುವಕನ ಬಂಧನ

Update: 2021-01-10 18:16 GMT

ಬೆಂಗಳೂರು, ಜ.10: ಯುವತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆನ್ನಲ್ಲೇ ಯುವಕನೋರ್ವನನ್ನು ಇಲ್ಲಿನ ಆರ್‍ಎಂಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜೆಮಿನಿ (19) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದ್ದು, ಈಕೆಯ ತಾಯಿ ಆತ್ಮಹತ್ಯೆ ಮಾಡಿಕೊಂಡ ಎರಡೇ ತಿಂಗಳಿಗೆ ಜೆಮಿನಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಖಾಸಗಿ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಜೆಮಿನಿ, ಕಾಲೇಜಿನಲ್ಲಿದ್ದಾಗಲೇ ಭರತ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಇದರಿಂದ ಬೇಸತ್ತು ಎರಡು ತಿಂಗಳ ಹಿಂದೆ ತಾಯಿ ಶಶಿಕಲಾ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿದೆ.

ಕಳೆದ ಜ.1 ರಂದು ಭರತ್, ಜೆಮಿನಿಯ ತಂದೆ ನಾಗರಾಜ್‍ಗೆ ಕರೆಮಾಡಿ ನಿಮ್ಮ ಮಗಳಿಗೆ ಹೊಸ ವರ್ಷದ ಶುಭಾಶಯ ಕೋರಲು ಫೋನ್ ಕೊಡುವಂತೆ ಕೇಳಿಕೊಂಡಿದ್ದ. ಇದರಿಂದ ಕೋಪಗೊಂಡ ನಾಗರಾಜ್, ಭರತ್‍ಗೆ ಬೈದು ಬುದ್ಧಿವಾದ ಹೇಳಿದ್ದರು. ಇದರಿಂದ ನೊಂದ ಜೆಮಿನಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ತಂದೆ ನಾಗರಾಜ್ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಆರೋಪಿ ಭರತ್‍ನನ್ನ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News