ಬಿಹಾರದಲ್ಲಿ ಎನ್‌ಆರ್‌ಸಿ ಜಾರಿಗೆ ಅವಕಾಶ ನೀಡಲ್ಲ ಎಂದ ನಿತೀಶ್ ಕುಮಾರ್

Update: 2021-01-10 18:35 GMT

ಪಾಟ್ನಾ: ಬಿಹಾರದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ)ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ. ಒಂದೊಮ್ಮೆ ಅದನ್ನು ಜಾರಿಗೊಳಿಸಲು ಮುಂದಾದರೆ ಅದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರವಿವಾರ ಹೇಳಿದ್ದಾರೆ. ಈ ಮೂಲಕ ಮಿತ್ರಪಕ್ಷ ಬಿಜೆಪಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಆಪರೇಶನ್ ಕಮಲ ನಡೆಸಿದ್ದ ಬಿಜೆಪಿ, ನಿತೀಶ್ ಅವರ ಜೆಡಿಯು ಪಕ್ಷದ ಆರು ಶಾಸಕರನ್ನು ಸೆಳೆದುಕೊಂಡಿತ್ತು. ಈ ಬೆಳವಣಿಗೆ ಬಳಿಕ ಇದೇ ಮೊದಲ ಬಾರಿ ನಿತೀಶ್ ಅವರು ಬಿಜೆಪಿಯ ಕಿವಿಹಿಂಡಿದ್ದಾರೆ

ಯಾರು ನಿಜವಾದ ಮಿತ್ರ, ಯಾರು  ಶತ್ರು ಎಂದು ಅರ್ಥಮಾಡಿಕೊಳ್ಳಲು ಆಗಲಿಲ್ಲ. ಚುನಾವಣೆಗೆ ಐದು ತಿಂಗಳು ಮುನ್ನವೇ ಎನ್‌ಡಿಎ ಜೊತೆಗೆ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳಬೇಕಿತ್ತು ಎಂದು ಈಗ ಅನಿಸುತ್ತಿದೆ. ಇದರಿಂದ ನಮಗೆ ಹೆಚ್ಚು ಲಾಭವಾಗುತ್ತಿತ್ತು ಎಂದು ನಿತೀಶ್ ಅವರು ಪಕ್ಷದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಅಭಿಪ್ರಾಯಪಟ್ಟ್ದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News