ರಸ್ತೆ ಅಪಘಾತ : ಯುವತಿ ಸೇರಿ ಮೂವರು ಸ್ಥಳದಲ್ಲೇ ಮೃತ್ಯು

Update: 2021-01-11 06:50 GMT

ಕಲಬುರಗಿ: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ರಾವೂರ ಬಳಿ ಸೋಮವಾರ ನಡೆದಿದೆ.

ರಾವೂರ ಗ್ರಾಮದ ನಿವಾಸಿ ಭೀಮಾಶಂಕರ ಸುಭಾಷ್ ಪ್ಯಾಟಿ (28), ಅಕ್ಬರ್ ಪಟೇಲ್ (26) ಹಾಗೂ 20 ವರ್ಷದ ಯುವತಿ  ಮೃತಪಟ್ಟಿದ್ದು, ಯುವತಿಯ ಗುರುತು ಪತ್ತೆಯಾಗಿಲ್ಲ. ಮೃತ ಯುವಕರಿಬ್ಬರು ಲಾರಿ ಚಾಲಕರಾಗಿ ವೃತಿಯಲ್ಲಿ ತೊಡಗಿದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ವಾಡಿ ಪೊಲೀಸ್ ಠಾಣೆಯ ಪಿ.ಎಸ್.ಐ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.

ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News