ಬಿಎಸ್‍ವೈ ಹೇಳಿದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ: ಆನಂದ್ ಸಿಂಗ್

Update: 2021-01-11 12:44 GMT

ಬಳ್ಳಾರಿ, ಜ.11: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

ಸೋಮವಾರ ಹೊಸಪೇಟೆ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಸಚಿವ ಸ್ಥಾನ ಸಿಗಬಹುದು. ಸಿಎಂ ಅವರಿಗೆ ಈಗಾಗಲೇ ಮಾತು ಹಾಗೂ ಆಶ್ವಾಸನೆ ನೀಡಿದ್ದಾರೆ. ಹಾಗೊಂದು ಬಾರಿ ನನಗೆ ಸಿಎಂ ಅವರು ಸೂಚಿಸಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ತಿಳಿಸಿದರು.

ಸಿಎಂ ಅವರು ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಇದಕ್ಕೆ ವಿಜಯನಗರವನ್ನು ನೂತನ ಜಿಲ್ಲೆ ಮಾಡಿರುವುದೇ ಉತ್ತಮ ಉದಾಹರಣೆಯಾಗಿದೆ. ಬಹಿರಂಗವಾಗಿ ವಿಜಯನಗರ ಜಿಲ್ಲೆಯ ಕುರಿತು ಹೇಳಿಕೆಯನ್ನು ನೀಡಿರಲಿಲ್ಲ. ಆದರೂ ಸಹ ಜಿಲ್ಲೆ ಘೋಷಣೆ ಮಾಡಿದರು ಎಂದು ತಿಳಿಸಿದರು.

ಅದರಂತೆ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನವನ್ನು ಸಹ ನೀಡಲಿದ್ದಾರೆ. ಸಂಪುಟ ರಚನೆ ಮಾಡುತ್ತಾರೊ ಅಥವಾ ವಿಸ್ತರಣೆ ಮಾಡುತ್ತಾರೋ ಎಂಬುದು ತಿಳಿದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News