ಗೋವುಗಳನ್ನು ಹಿಂದೂಗಳೂ ತಿನ್ನುತ್ತಾರೆ: ಶಾಸಕ ಅಖಂಡ ಶ್ರೀನಿವಾಸಮೂರ್ತಿ

Update: 2021-01-12 16:07 GMT

ಬೆಂಗಳೂರು, ಜ.12: ರಾಜ್ಯ ಸರಕಾರ ಗೋಹತ್ಯೆ ನಿಷೇಧಕ್ಕೆ ಮುಂದಾಗಿರುವುದು ತಪ್ಪು. ಅಲ್ಲದೆ, ಗೋಮಾಂಸವನ್ನು ಮುಸ್ಲಿಮರು ಮಾತ್ರವಲ್ಲದೆ, ಹಿಂದೂಗಳು ತಿನ್ನುತ್ತಾರೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣಾ ವಿಧೇಯಕ-2020 ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಿರುವುದು ಸರಿಯಲ್ಲ. ಇದನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿದೆ ಎಂದರು.

ಮುಂದಿನ ಅಧಿವೇಶನದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಈ ಕಾನೂನು ಬಗ್ಗೆ ಚರ್ಚೆ ನಡೆಸಲಾಗುವುದು. ಅಲ್ಲದೆ, ಗೋಮಾಂಸವನ್ನು ಮುಸ್ಲಿಮರು ಮಾತ್ರವಲ್ಲದೆ, ಹಿಂದೂಗಳು, ಕ್ರೈಸ್ತರು ತಿನ್ನುತ್ತಾರೆ. ಆಹಾರ ಸಂಸ್ಕೃತಿ ಅವರು ಹಕ್ಕಾಗಿದೆ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News