ತಲೆ ಮೇಲೆ ಕಲ್ಲು ಎತ್ತಿ ಹಾಕಿ ತಂದೆಯನ್ನು ಹತ್ಯೆಗೈದ ಮಗ

Update: 2021-01-12 17:36 GMT

ಕಡೂರು, ಜ.12: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಹತ್ಯೆಗೈದಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಬಳಿಯ ಮಾಚಗೊಂಡನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ತಿಮ್ಮಯ್ಯ(65) ಮೃತ ವ್ಯಕ್ತಿಯಾಗಿದ್ದು, ಇವರ ಮಗ ಸತೀಶ ಎಂಬಾತ ಖಾಸಗಿ ಹಣಕಾಸು ಸಂಸ್ಥೆಯ ಮೂಲಕ ಟ್ರ್ಯಾಕ್ಟರ್ ಖರೀದಿಸಿ ಕಂತು ಪಾವತಿ ಮಾಡದೇ ಇದ್ದ ಕಾರಣ ಫೈನಾನ್ಸ್ ನವರು ಆತನ ಮನೆಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಕಂತು ಪಾವತಿ ಮಾಡದೇ ಇರುವುದಕ್ಕೆ ತಿಮ್ಮಯ್ಯ ತನ್ನ ಮಗನ ವಿರುದ್ಧ ಆಕ್ಷೇಪ ಮಾಡಿದ್ದಾರೆ. ಈ ಸಂದರ್ಭ ಮಾತಿಗೆ ಮಾತು ಬೆಳೆದು ಸತೀಶ ತನ್ನ ತಂದೆ ತಿಮ್ಮಯ್ಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ.

ಘಟನೆ ಸಂಬಂದ ಸಖರಾಯಪಟ್ಟಣ ಪೊಲೀಸರು ಸತೀಶನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನಾ ಸ್ಥಳಕ್ಕೆ ತರಿಕೆರೆ ಡಿವೈಎಸ್ಪಿ ಏಗನಗೌಡ, ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಖರಾಯಪಟ್ಟಣ ಪಿಎಸ್‍ಐ ಹರೀಶ್ ಭೇಟಿ ನೀಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News