ಬ್ಲ್ಯಾಕ್ ಮೇಲ್ ಮಾಡಿದವರಿಗೆ, ಹಣ ನೀಡಿದವರಿಗೆ ಸಚಿವ ಸ್ಥಾನ: ಬಿಜೆಪಿ ಶಾಸಕ ಯತ್ನಾಳ್ ವಾಗ್ದಾಳಿ

Update: 2021-01-13 11:18 GMT

ವಿಜಯಪುರ, ಜ.13: ನೂತನ ಸಚಿವ ಸಂಪುಟದಲ್ಲಿ ಬ್ಲ್ಯಾಕ್ ಮೇಲ್ ಮಾಡಿದ ಮೂವರಿಗೆ ಹಾಗೂ ಹಣ ನೀಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. 

ವಿಜಯಪುರದಲ್ಲಿ ಮಾತನಾಡಿದ ಅವರು, ಬ್ಲ್ಯಾಕ್ ಮೇಲ್ ಮಾಡಿ ಮೂವರು ಸ್ಥಾನ‌ ಪಡೆದಿದ್ದಾರೆ. ಹಣ ನೀಡಿದವರಿಗೂ ಸಚಿವ ಸ್ಥಾನ ಸಿಕ್ಕಿದೆ ಎಂದು ಆರೋಪಿಸಿದರು.

ಈ ಹಿಂದೆ ಕೆಲವು ನಮ್ಮ ಶಾಸಕರು ಕೂಡಿ ಸಿಎಂ ಯಡಿಯೂರಪ್ಪರನ್ನು ಕೆಳಗಿಳಿಸೋಣವೆಂದು ಬೆಂಬಲ ಕೋರಿದರು. ಅವರ ಆ ಮಾತು ಕೇಳಿ ನನಗೆ ಆಶ್ಚರ್ಯವಾಗಿತ್ತು. ಆದರೆ ಈಗ, ಹಣ ನೀಡಿದವರಿಗೆ, ಬ್ಲ್ಯಾಕ್ ಮೇಲ್ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News