ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಎಚ್.ನಾಗೇಶ್ ನೇಮಕ

Update: 2021-01-13 14:53 GMT

ಬೆಂಗಳೂರು, ಜ.13: ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಎಚ್.ನಾಗೇಶ್ ಅವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ, ಸಂಪುಟ ದರ್ಜೆಯ ಸ್ಥಾನಮಾನ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಮುನಿಕೃಷ್ಣರನ್ನು ಮಾರುಕಟ್ಟೆ ಕಮ್ಯುನಿಕೇಷನ್ ಮತ್ತು ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷರನ್ನಾಗಿ ನೇಮಿಸಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News