ರೆಡ್‌ಕ್ರಾಸ್‌ನಿಂದ ಕೊರೋನ ವಾರಿಯರ್ಸ್‌ಗೆ ಕಿಟ್‌ವಿತರಣೆ

Update: 2021-01-13 15:28 GMT

ಉಡುಪಿ, ಜ13: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸಿದ ಆಸ್ಪತ್ರೆಯ ಸಿಬ್ಬಂದಿಗಳಿಗೆ ಪರಿಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕೋವಿಡ್-19 ಸಂದರ್ಭದಲ್ಲಿಯೂ ಜೀವದ ಹಂಗು ತೊರೆದು ಇತರರ ಜೀವವನ್ನು ಉಳಿಸಲು ಹಗಲಿರುಳು ದುಡಿದ ಸಿಬ್ಬಂದಿಗಳಿಗೆ ರೆಡ್‌ಕ್ರಾಸ್ ಸಂಸ್ಥೆಯಿಂದ ಕಿಟ್ ವಿತರಿಸಿ, ಅವರ ಸೇವೆಯನ್ನು ಪ್ರಶಂಸಿಸಿದರು.

ಗೌರವ ಕಾರ್ಯದರ್ಶಿ ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ, ಡಿಡಿಆರ್‌ಸಿ ಸದಸ್ಯ ಕಾರ್ಯದರ್ಶಿ ಕೆ. ಸನ್ಮತ್ ಹೆಗ್ಡೆ ಹಾಗೂ ನೋಡಲ್ ಅಧಿಕಾರಿಗಳಾದ ಅನುಷಾ ಆಚಾರ್ಯ, ಸುನೀತಾ ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಸ್ವಾಗತಿಸಿದರು. ಈ ಸಂದರ್ಭದಲ್ಲಿ ಉಡುಪಿ ಹೈಟೆಕ್ ಆಸ್ಪತ್ರೆ, ಬ್ರಹ್ಮಾವರ ಪ್ರಣವ್ ಆಸ್ವತ್ರೆ ಮತ್ತು ಕಲ್ಯಾಣಪುರದ ಗೋರಟ್ಟಿ ಆಸ್ವತ್ರೆಯ ಒಟ್ಟು 45 ಸಿಬ್ಬಂದಿಗಳಿಗೆ ಕಿಚನ್ ಸೆಟ್ಸ್, ಪೇಸ್ ಮಾಸ್ಕ್ ಮತ್ತು ಸೋಪುಗಳನ್ನು ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News