ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ದುಶ್ಯಂತ್ ದವೆ

Update: 2021-01-14 10:05 GMT

ಹೊಸದಿಲ್ಲಿ,ಜ.14: ‘ನಾಯಕನಾಗಿ ಮುಂದುವರಿಯುವ ನನ್ನ ಹಕ್ಕನ್ನು ಕಿತ್ತುಕೊಳ್ಳಲಾಗಿದೆ' ಎಂಬ ಹೇಳಿಕೆಯನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್ ವಕೀಲರ ಸಂಘ (ಸುಪ್ರೀಂ ಕೋರ್ಟ್ ಬಾರಿ ಅಸೋಸಿಯೇಶನ್) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ವಕೀಲ ದುಶ್ಯಂತ್ ದವೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು barandbench.com ವರದಿ ಮಾಡಿದೆ.

ಈಗಾಗಲೇ ಸಮಿತಿಯ ಕಾಲಾವಧಿ ಮುಗಿದಿದೆ. ಈ ಸಂದರ್ಭದಲ್ಲಿ ವರ್ಚುವಲ್ ಚುನಾವಣೆಯನ್ನು ನಡೆಸುವುದರ ಬಗ್ಗೆ ಹಲವಾರು ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ಅವರ ಪರಿಸ್ಥಿತಿ ನನಗೆ ಅರ್ಥವಾಗುತ್ತಿದೆ. ಅವರೊಂದಿಗೆ ನನಗೆ ಯಾವುದೇ ದ್ವೇಷವಿಲ್ಲ. ಆದರೆ ಈಗಿರುವ ಪರಿಸ್ಥಿತಿಯಲ್ಲಿ ಅಧ್ಯಕ್ಷನಾಗಿ ಮುಂದುವರಿಯಲು ನನಗೆ ನೈತಿಕವಾಗಿ ತಪ್ಪೆನಿಸುತ್ತಿರುವ ಕಾರಣ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ದುಶ್ಯಂತ್ ದವೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಲ್ಲಿ ಕೆಲವು ರೈತ ಸಂಘಗಳ ಪರವಾಗಿ ಪ್ರತಿನಿಧಿಸಿದ್ದರು. ಬಳಿಕ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News