ನಿಯಂತ್ರಣ ತಪ್ಪಿ ಬಿದ್ದ ಗ್ಯಾಸ್ ಸಿಲಿಂಡರ್ ಲಾರಿ: ತಪ್ಪಿದ ಭಾರೀ ಅನಾಹುತ

Update: 2021-01-14 12:42 GMT

ಬೆಂಗಳೂರು, ಜ.14: ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯ ಸ್ಟೇರಿಂಗ್ ಕಟ್ಟಾಗಿ ಉರುಳಿಬಿದ್ದು ಭಾರೀ ಪ್ರಮಾಣದ ಅನಾಹುತ ತಪ್ಪಿರುವ ಘಟನೆ ವರ್ತೂರು ಕೆರೆ ಸೇತುವೆ ಬಳಿ ನಡೆದಿದೆ.

ಅಪಘಾತದಲ್ಲಿ ಚಾಲಕ ಹಾಗೂ ಕ್ಲೀನರ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ವರ್ತೂರು ಕೆರೆ ಸೇತುವೆ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯ ಸ್ಟೇರಿಂಗ್ ಕಟ್ಟಾಗಿ ಉರುಳಿಬಿದ್ದಿದೆ. ಲಾರಿಯ ವೇಗ ಕಡಿಮೆಯಿದ್ದರಿಂದ ಭಾರೀ ಪ್ರಮಾಣದ ಅನಾಹುತ ತಪ್ಪಿದೆ.

ಈ ಸಂಬಂಧ ವೈಟ್‍ಫೀಲ್ಡ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News