ಸಿಡಿ ಪ್ರಕರಣ ರಾಜ್ಯದಲ್ಲಿ ಬಿಜೆಪಿ ಮುಕ್ತಿಗೆ ನಾಂದಿ: ಪ್ರಿಯಾಂಕ್ ಖರ್ಗೆ

Update: 2021-01-14 16:38 GMT
Photo: Facebook

ಬೆಂಗಳೂರು, ಜ.14: ಬಿಜೆಪಿ ಸರಕಾರದ ಸಚಿವ ಸಂಪುಟದ ವಿಸ್ತರಣೆಯ ವೇಳೆ ಚರ್ಚೆಗೆ ಈಡಾಗುತ್ತಿರುವ ಸಿಡಿ ಪ್ರಕರಣವು ರಾಜ್ಯದಲ್ಲಿ ಬಿಜೆಪಿ ಮುಕ್ತವಾಗುವ ಮುನ್ಸೂಚನೆಯಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಅಭಿಪ್ರಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವ ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಡಿ ಬಿಡುಗಡೆ ಮಾಡಲಾಗುವುದೆಂದು ಬೆದರಿಕೆ ಹಾಕುತ್ತಿದ್ದಾರೆ. ಇದು ಕೇವಲ ಯಡಿಯೂರಪ್ಪಗೆ ಮಾತ್ರ ಸಮಸ್ಯೆಯಾಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಪತನಕ್ಕೆ ನಾಂದಿ ಆಗಲಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತದಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಚಿವ ಸ್ಥಾನ ಸಿಗಲಿಲ್ಲ. ಅವರಿಗೆ ಈ ಭಾಗದ ಬಗ್ಗೆ ಯಾವ ಕಾಳಜಿಯೂ ಇಲ್ಲವೆಂಬುದು ಇದರಿಂದ ಸ್ಪಷ್ಟವಾಗಲಿದೆ ಎಂದು ಅವರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News