ಜ.17: ಅಮುಕ್ತ್ ವಾರ್ಷಿಕ ಸಮ್ಮೆಳನ

Update: 2021-01-14 17:27 GMT

ಮಂಗಳೂರು, ಜ.14: ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘ (ಅಮುಕ್ತ್)ದ ವಾರ್ಷಿಕ ಸಮ್ಮೇಳನವು ಜ.17ರಂದು ಪೂ.11:30ರಿಂದ ನಗರದ ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ) ನಗರದ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಈ ಸಮ್ಮೇಳನದಲ್ಲಿ ಮಂಗಳೂರು ವಿವಿ ಕುಲಸಚಿವ ಕೆ.ರಾಜು ಮೊಗವೀರ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಅಪ್ಪಾಜಿ ಗೌಡ ಎಸ್‌ಬಿ, ಕಾಲೇಜಿನ ಪ್ರಾಂಶುಪಾಲ ಡಾ. ಎಂ. ವೆನಿಸ್ಸಾ ಎ.ಸಿ. ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಮುಕ್ತ್ ಅಧ್ಯಕ್ಷ ಡಾ.ಎನ್.ಎಂ. ಜೊಸೆಫ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News