ಆಟೋ ಹರಿಸಿ ವ್ಯಕ್ತಿಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2021-01-14 18:23 GMT

ಮೈಸೂರು,ಜ.14: ವ್ಯಕ್ತಿಯೋರ್ವರ ಮೇಲೆ ಆಟೋ ಹರಿಸಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಎನ್.ಆರ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಮೈಸೂರಿನ ಬಿ.ಎಂ.ಶ್ರೀ ನಗರದ ಶ್ರೀಧರ್, ಗೋವಿಂದರಾಜು ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಿಂತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಆಟೋ ಹತ್ತಿಸಿ ಕೊಲೆಮಾಡಿದ್ದರು.

ಆಟೋ ಹತ್ತಿಸಿ ಕೊಲೆ ಮಾಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿ ಫೂಟೇಜ್ ಆಧರಿಸಿ ಎನ್.ಆರ್ ಠಾಣೆಯ ಇನ್‍ಸ್ಪೆಕ್ಟರ್ ಅಝರುದ್ದೀನ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.

ಬಂಧಿತರ ವಿಚಾರಣೆ ಸಂದರ್ಭ, ಕುಡಿದ ಮತ್ತಿನಲ್ಲಿ ಹಣಕಾಸಿನ ವಿಚಾರವಾಗಿ ಚಾಲಕ ಮಲ್ಲಿಕಾರ್ಜುನನೊಂದಿಗೆ ಆತನ ಸ್ನೇಹಿತ ಶ್ರೀಧರ್ ಜಗಳವಾಡಿದ್ದ. ಈ ದ್ವೇಷದಿಂದ ಶ್ರೀಧರ್ ಮತ್ತೋರ್ವ ಸ್ನೇಹಿತ ಗೋವಿಂದರಾಜುನನ್ನು ಕರೆಸಿ ಮಲ್ಲಿಕಾರ್ಜುನನ್ನು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಎನ್.ಆರ್ ಪೊಲೀಸರು ಬಂಧಿತರನ್ನು ವಿಚಾರಣೆಗೊಳಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News