ಜ.17 : ಬೆಳ್ಮಣ್‌ನಲ್ಲಿ ಬೃಹತ್ ರಕ್ತದಾನ ಶಿಬಿರ

Update: 2021-01-15 15:57 GMT

ಉಡುಪಿ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಲಯನ್ಸ್ ಕ್ಲಬ್ ಬೆಳ್ಮಣ್, ಲಯನ್ಸ್ ಕ್ಲಬ್ ಬೆಳ್ಮಣ್ ಸೆಂಚುರಿ, ರಾಜಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೆಳ್ಮಣ್ ಮತ್ತು ಇತರ ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಜ.17ರಂದು ಆಯೋಜಿಸಲಾಗಿದೆ.

ಈ ರಕ್ತದಾನ ಶಿಬಿರ ಬೆಳ್ಮಣ್ ಬಸ್‌ನಿಲ್ದಾಣದ ಬಳಿಯ ಚರ್ಚ್ ಸಂಕೀರ್ಣದಲ್ಲಿ ಬೆಳಗ್ಗೆ 9 ರಿಂದ ಅಪರಾಹ್ನ 1 ರವರೆಗೆ ನಡೆಯಲಿದೆ. ಕೋವಿಡ್-19 ರೋಗದಿಂದಾಗಿ ಕಸ್ತೂರ್ಬಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದಲ್ಲಿ ರಕ್ತದ ತೀವ್ರ ಕೊರತೆ ಇರುವುದರಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಈ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಹೀಗಾಗಿ ರಕ್ತದಾನ ಮಾಡಲು ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಮುಂದೆ ಬರಬೇಕೆಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಬೆಳ್ಮಣ್ ಹಾಗೂ ಆಸುಪಾಸಿನ ಜನರಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News