ಸಿಡಿ ಇಟ್ಟುಕೊಂಡು ಅನುದಾನ ಪಡೆಯುತ್ತಾರೆಂಬ ಯತ್ನಾಳ್ ಹೇಳಿಕೆ ಸತ್ಯಕ್ಕೆ ದೂರ: ಎಸ್.ಆರ್.ಪಾಟೀಲ್

Update: 2021-01-15 16:53 GMT

ಬೆಂಗಳೂರು, ಜ.15: ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾದಾಗ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಧ್ವನಿ ಎತ್ತುತ್ತಾರೆ. ಆ ಧೈರ್ಯವನ್ನು ತಾವು ಮೆಚ್ಚುತ್ತೇವೆ. ಆದರೆ, ಕಾಂಗ್ರೆಸ್ ಮುಖಂಡರು ಸಿಡಿ ಇಟ್ಟುಕೊಂಡು ಸಿಎಂ ಅವರನ್ನು ಅಂಜಿಸಿ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಪಡೆಯುತ್ತಾರೆ ಎನ್ನುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಶುಕ್ರವಾರ ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡಬೇಕೆಂದು ಸಿಎಂ ಅವರಿಗೆ ಪತ್ರ ಬರೆದರೂ ಅನುದಾನ ನೀಡದೇ, ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಮ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹೊಸದಿಲ್ಲಿಯಲ್ಲಿ ರೈತರು ಎರಡು ತಿಂಗಳಿನಿಂದ ನಡೆಸುತ್ತಿರುವ ಹೋರಾಟ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಮನಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News